7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
(ಗೆಳೆಯ ಆಸ್ಟಿನ್ ಜೋಸ್ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲಿನವ. ವೃತ್ತಿಯಿಂದ ವಿಪ್ರೊ ಕಂಪನಿಯಲ್ಲಿ ತಂತ್ರಾಂಶ ತಜ್ಞ. ವಿಜಯನಗರ ಕಾಲದ ನಾಣ್ಯ ಸಂಗ್ರಹ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
ಸ್ನೇಹಿತರೆ, ‘Gold questnet ಪೋಸ್ಟ್ಮಾರ್ಟಂ:ಚಿನ್ನ ಮಾರಿ ಲಕ್ಷ ಗಳಿಸಿ’ ಲೇಖನ ಇಷ್ಟೊಂದು ಸಂಚಲನಕ್ಕೆ ಕಾರಣವಾಗುತ್ತೆ ಅನ್ನೋ ಯೋಚನೆ ನನಗಿರಲಿಲ್ಲ. ಇ-ಮೈಲ್ನಲ್ಲಿ, ಫ...
-
ಕೆಲವೊಮ್ಮೆ ಹಾಗಾಗುತ್ತೆ. ಎದುರಾಗುವ ಪ್ರತಿ ಸನ್ನಿವೇಷವೂ ನಮಗೆ ವಿರುದ್ಧವಾಗಿ ವರ್ತಿಸುತ್ತಿರುತ್ತದೆ. ಕನ್ನಡ ಅಂತರ್ಜಾಲ ಜಗತ್ತಿನಲ್ಲಿ ಕನ್ನಡದ ಪ್ರಾತಿನಿಧ್ಯತೆಯನ್ನು ಐದ...
-
ಕಂಪ್ಯೂಟಿಂಗ್ ವಾತಾವರಣದಲ್ಲಿ ಕನ್ನಡದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕನ್ನಡಸಾಹಿತ್ಯಡಾಟ್ಕಾಂ ಸರ್ಕಾರಕ್ಕೆ ಸಲ್ಲಿಸಲಿರುವ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ...
-
ನಡು ಮಧ್ಯಾಹ್ನದಲ್ಲೂ ಆವರಿಸುವ ದಟ್ಟ ಮಂಜು. ಅದು ಮಂಜೋ, ಪ್ಲಾಸ್ಟಿಕ್ಕಿನ ಹೊಗೆಯೋ, ಹೊತ್ತಗೆ ಸುಟ್ಟುಹೋದ ಕಮಟು ಪರಿಮಳವೋ ಅರಿಯದೆ ಮನ, ಮಲಿನ ಖೋಡಿ . ಕಸದ ಹೊಳೆಯಲಿ ಹಾಯಿದ...
-
ಬರಹಗಾರರು - ವಿಶಾಲಮತಿ , `ಪುಸ್ತಕ ಪ್ರೀತಿ' ಬ್ಲಾಗ್ ಅಂತರ್ಜಾಲದ ಓದುಗರಿಗೆ ಕನ್ನಡ ಪುಸ್ತಕಗಳ ಬಗೆಗಿನ ಪ್ರೀತಿಯನ್ನು ಬೆಳೆಸಬೇಕೆಂಬ ಉದ್ದೇಶದಿಂದ ಬ್ಲಾಗ್ ಪ್ರಪಂಚದಲ...
No comments:
Post a Comment