7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
www.samvaada.com Dear Friends, "Samvaada.com" is constantly orgainising film shows, film discourses and film readings in order...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
(ಗೆಳೆಯ ಆಸ್ಟಿನ್ ಜೋಸ್ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲಿನವ. ವೃತ್ತಿಯಿಂದ ವಿಪ್ರೊ ಕಂಪನಿಯಲ್ಲಿ ತಂತ್ರಾಂಶ ತಜ್ಞ. ವಿಜಯನಗರ ಕಾಲದ ನಾಣ್ಯ ಸಂಗ್ರಹ...
-
ಸ್ನೇಹಿತರೆ, ಆವತ್ತು ಭಾನುವಾರ ಬಸವನಗುಡಿಯ ಎನ್.ಆರ್.ಕಾಲೋನಿಯಲ್ಲಿ ಬಸ್ಸಿಳಿದಾಗ ಬೇಸಿಗೆಯ ಧಗೆ ಮುಖಕ್ಕೆ ರಾಚುತ್ತಿತ್ತು. ಮೈಯ ಶಕ್ತಿಯೆಲ್ಲಾ ಬೆವರಾಗಿ ಹರಿದು ಕರ್ಚೀಪು ಒ...
-
ಟಿವಿ ವಾಹಿನಿಗಳ ಅಬ್ಬರ ಮತ್ತು ಸರ್ಕಾರಿ ರೇಡಿಯೊ ವಾಹಿನಿಗಳ ಏಕತಾನತೆಯ ಕಾರ್ಯಕ್ರಮಗಳನ್ನು ಕೇಳಿ ಬೇಸತ್ತು ರೇಡಿಯೊವನ್ನು ಮೂಲೆಗೆಸೆದಿದ್ದ ಜನರನ್ನು ಮತ್ತೆ ರೇಡಿಯೋದೆಡೆಗೆ...
No comments:
Post a Comment