3.08.2008
`ವಿಷಾದ ಕಾಲ' : ಒಂದು ಕವನ
ನಡು ಮಧ್ಯಾಹ್ನದಲ್ಲೂ ಆವರಿಸುವ ದಟ್ಟ ಮಂಜು.
ಅದು ಮಂಜೋ, ಪ್ಲಾಸ್ಟಿಕ್ಕಿನ ಹೊಗೆಯೋ,
ಹೊತ್ತಗೆ ಸುಟ್ಟುಹೋದ
ಕಮಟು ಪರಿಮಳವೋ ಅರಿಯದೆ
ಮನ, ಮಲಿನ ಖೋಡಿ .
ಕಸದ ಹೊಳೆಯಲಿ ಹಾಯಿದೋಣಿ ವಿಹಾರ
ಸಂದುಗಳ ಬಂಧನದಲಿ ಸಣ್ಣ ಕುಸುಕು
ಮಬ್ಬಿನಲಿ ನಿಡಿ ನೋಟಕ್ಕೂ ಸಿಗದ ಕಪ್ಪು ಸೂರ್ಯ.
ಚೆಂಗನೆ ನೆಗೆವ ಜಿಂಕೆಯ ಕೊಂದು
ಕಮ್ಮನೆ ಮಾಂಸ ಹುರಿಯಲೋಸುಗ
ಹೊಗೆಮಂಜಿನ ಅಡಿ ಕರಕಲಾಯಿತು
ಬೂದಿ ಬಾನಾಯಿತು-ಬಯಸಿ
ಹಿಟ್ಟು ನಾದಿ ನಾದಿ ನೀರಾಗಿ
ಕರಗಿ ಕರಗಿ ಬೆಣ್ಣೆನುಣುಪು
ರಾಡಿ-ಜೇಡಿ ಪದರ ತೋಡಿ
ಉಸುಕು ನಿಚ್ಛಳ
ಭಾವಜಲದೊಡಗೂಡಿ.
ನಿಶ್ಛಲ ನಿರ್ವಾತ ನಿರಂತರ
Subscribe to:
Post Comments (Atom)
ಜನಪ್ರಿಯ ಲೇಖನಗಳು
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
ಕೆಲವೊಮ್ಮೆ ಹಾಗಾಗುತ್ತೆ. ಎದುರಾಗುವ ಪ್ರತಿ ಸನ್ನಿವೇಷವೂ ನಮಗೆ ವಿರುದ್ಧವಾಗಿ ವರ್ತಿಸುತ್ತಿರುತ್ತದೆ. ಕನ್ನಡ ಅಂತರ್ಜಾಲ ಜಗತ್ತಿನಲ್ಲಿ ಕನ್ನಡದ ಪ್ರಾತಿನಿಧ್ಯತೆಯನ್ನು ಐದ...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
ಕನ್ನಡಸಾಹಿತ್ಯ.ಕಾಂ ಸಾಮೂಹಿಕ ಚಟುವಟಿಕೆಯಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ನೆಡೆದ ಸಂಪೂರ್ಣ ಮತ್ತು ಪದಪರೀಕ್ಷಕ ಬಿಡುಗಡೆ ಸಮಾರಂಭ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದಲ್...
-
ಬರಹ: ಕಿರಣ್ ಎಂ ನಿರ್ವಾಹಕರು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಬೆಂಗಳೂರು ಈ ಶಿಬಿರದ ಮಾಸ್ಟರ್ ಪ್ಲಾನ್ ಎರಡು ತಿಂಗಳು ಹಳೆಯದ್ದು. ಬೆಂಗಳೂರಿನ ಧಾವಂತದಲ್ಲಿ ನಮ್ಮನ್ನೆ...
-
ಸಂವಾದ ಡಾಟ್ ಕಾಂ(www.samvaada.com) ದೃಶ್ಯ ಮಾಧ್ಯಮಗಳಲ್ಲಿ ಅಕೆಡೆಮಿಕ್ ಅರಿವಿನ ಗುಣಮಟ್ಟದ ಪಠ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸದಭಿರುಚಿಯ ಚಿತ್ರ ಪ್ರದ...
-
ಬರಹಗಾರರು - ವಿಶಾಲಮತಿ , `ಪುಸ್ತಕ ಪ್ರೀತಿ' ಬ್ಲಾಗ್ ಅಂತರ್ಜಾಲದ ಓದುಗರಿಗೆ ಕನ್ನಡ ಪುಸ್ತಕಗಳ ಬಗೆಗಿನ ಪ್ರೀತಿಯನ್ನು ಬೆಳೆಸಬೇಕೆಂಬ ಉದ್ದೇಶದಿಂದ ಬ್ಲಾಗ್ ಪ್ರಪಂಚದಲ...
1 comment:
ರವಿಯವರೇ,
ಈ ಕವನಕ್ಕೊಂದು ಚಿತ್ರ ಬರೆಯಬೇಕೆಂಬ ಆಸೆ ಆಯ್ತು..ಹಾಡು ಅರ್ಥ ಮಾಡ್ಕೊಳ್ತಾ ಇದಿನಿ..ಕೊನೆಯ ಪ್ಯಾರಾದ ಪದಗಳು ಕ್ಲಿಷ್ಟ ಅನ್ನಿಸ್ತಿದೆ ನಂಗೆ...ಮೊದಲ ಪ್ಯಾರಾದ ಪದಗಳ ಬಳಕೆ, ಜೋಡಣೆ ಅಧ್ಬುತ...ಇನ್ನೂಳಿದ ಪ್ಯಾರನ ಅರ್ಥ ಮಾಡ್ಕೊಳ್ತಾ ಇದಿನಿ :)...ನೀವು ಸುಲಭವಾಗಿಸ್ತಿರಿ ಅನ್ನೊ ನಂಬಿಕೆ ನನ್ಗಿದೆ...
Post a Comment