7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಶೇಷಾದ್ರಿಪುರಂ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಚರಿಸುತ್ತಿರುವ ಕನ್ನಡಸಾಹಿತ್ಯ.ಕಾಂ ನ ಐದನೇ ವಾರ್ಷಿಕೋತ್ಸವ, ...
-
ಲೇಖಕರು: ಎಚ್ ಎಸ್ ಪ್ರಭಾಕರ್ ಕೃಪೆ: ಸಂಯುಕ್ತ ಕರ್ನಾಟಕ ಹಾಸನ, ಜೆ.ಡಿ.ಎಸ್. ಭದ್ರಕೋಟೆಯಾಗಿದ್ದರೂ ಮುಂಬರುವ ಸಂಸತ್ ಚುನಾವಣೆಗಳಲ್ಲಿ ಸ್ವಲ್ಪ ಸಂಘಟಿತ ಶ್ರಮ ಹಾಕಿದ್ದರ...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
(ಗೆಳೆಯ ಆಸ್ಟಿನ್ ಜೋಸ್ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲಿನವ. ವೃತ್ತಿಯಿಂದ ವಿಪ್ರೊ ಕಂಪನಿಯಲ್ಲಿ ತಂತ್ರಾಂಶ ತಜ್ಞ. ವಿಜಯನಗರ ಕಾಲದ ನಾಣ್ಯ ಸಂಗ್ರಹ...
-
ಕನ್ನಡಸಾಹಿತ್ಯ.ಕಾಂ ಗೆ ಆಗ ತಾನೆ ಒಂದು ಜಯ ದೊರಕಿತ್ತು. ಮೈಕ್ರೋಸಾಫ್ಟ್ನ 'ತುಂಗಾ' ಫಾಂಟ್ ವಿಚಾರದಲ್ಲಿ ಕನ್ನಡಸಾಹಿತ್ಯ.ಕಾಮ್ ನೆಡೆಸಿದ ಹೋರಾಟ, ಚರ್ಚೆಗಳು, ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
(ಸ್ನೇಹಿತರೆ ಬೆಂಗಳೂರು ಮಾತನಾಡುವವರಿಗೆ ಮುಕ್ತ ಅವಕಾಶ ನೀಡಿದೆ. ಇಲ್ಲಿ ಕನ್ನಡಿಗರನ್ನು ಬಯ್ಯಬಹುದು. ಅನ್ಯಭಾಷಿಗರನ್ನು ಅವರ ಭಾಷೆಯಲ್ಲಿಯೇ ಓಲೈಸಬಹುದು. ಬೀದಿ ನಾಯಿಗಳ ಪರ...
-
ಲೇಖಕರು: ಎಚ್.ಎಸ್. ಪ್ರಭಾಕರ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ನಿಧನರಾದ ಪ್ರಯುಕ್ತ ಸರ್ಕಾರ ಜ.೨೮ ರಿಂದ ಫೆ.೩ ರವರೆಗೆ ಒಂದು ವಾರ ಶೋಕಾಚರಣೆ ಪ್ರಕಟಿಸಿದ್ದು ಸರಿ...
No comments:
Post a Comment