7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಸ್ನೇಹಿತರೆ, ಆವತ್ತು ಭಾನುವಾರ ಬಸವನಗುಡಿಯ ಎನ್.ಆರ್.ಕಾಲೋನಿಯಲ್ಲಿ ಬಸ್ಸಿಳಿದಾಗ ಬೇಸಿಗೆಯ ಧಗೆ ಮುಖಕ್ಕೆ ರಾಚುತ್ತಿತ್ತು. ಮೈಯ ಶಕ್ತಿಯೆಲ್ಲಾ ಬೆವರಾಗಿ ಹರಿದು ಕರ್ಚೀಪು ಒ...
-
www.samvaada.com Dear Friends, "Samvaada.com" is constantly orgainising film shows, film discourses and film readings in order...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
(ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ. ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರು...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
ಕನ್ನಡಸಾಹಿತ್ಯ.ಕಾಂ ಸಾಮೂಹಿಕ ಚಟುವಟಿಕೆಯಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ನೆಡೆದ ಸಂಪೂರ್ಣ ಮತ್ತು ಪದಪರೀಕ್ಷಕ ಬಿಡುಗಡೆ ಸಮಾರಂಭ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದಲ್...
-
ಭಾನುವಾರ ಅಕ್ಟೋಬರ್ ೧. ಆಯುಧ ಪೂಜೆ ದಿವಸ, ಮೈಸೂರಿಗೆ ದಸರ ಸಂಭ್ರಮ. ಮೈಸೂರೆಂಬ ರಾಜನಗರಿ ನವ ವಧುವಂತೆ ಅಲಂಕಾರಗೊಂಡು ಮೈಮರೆತಿತ್ತು. ಆ ಸಂದರ್ಭದಲ್ಲಿ ಬೆಂಗಳೂರಿನ ಹಬ್ಬ...
-
ಮಾನ್ಯ ಮುಖ್ಯ ಮಂತ್ರಿಗಳು ಹಾಗು ಮಾಹಿತಿ ತಂತ್ರಜ್ಞಾನ ಸಚಿವರು, ಕರ್ನಾಟಕ ಸರ್ಕಾರ ಮಾನ್ಯ ಪ್ರಾಥಮಿಕ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಮಾನ್ಯ ಪ್ರೌಢ ಶಿಕ್ಷಣ ಸಚಿವರು ಕರ...
-
ಕಂಪ್ಯೂಟಿಂಗ್ ವಾತಾವರಣದಲ್ಲಿ ಕನ್ನಡದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕನ್ನಡಸಾಹಿತ್ಯಡಾಟ್ಕಾಂ ಸರ್ಕಾರಕ್ಕೆ ಸಲ್ಲಿಸಲಿರುವ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ...
No comments:
Post a Comment