7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
ಲೇಖಕರು: ಎಚ್ ಎಸ್ ಪ್ರಭಾಕರ್ ಕೃಪೆ: ಸಂಯುಕ್ತ ಕರ್ನಾಟಕ ಹಾಸನ, ಜೆ.ಡಿ.ಎಸ್. ಭದ್ರಕೋಟೆಯಾಗಿದ್ದರೂ ಮುಂಬರುವ ಸಂಸತ್ ಚುನಾವಣೆಗಳಲ್ಲಿ ಸ್ವಲ್ಪ ಸಂಘಟಿತ ಶ್ರಮ ಹಾಕಿದ್ದರ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
ಬರಹಗಾರರು - ವಿಶಾಲಮತಿ , `ಪುಸ್ತಕ ಪ್ರೀತಿ' ಬ್ಲಾಗ್ ಅಂತರ್ಜಾಲದ ಓದುಗರಿಗೆ ಕನ್ನಡ ಪುಸ್ತಕಗಳ ಬಗೆಗಿನ ಪ್ರೀತಿಯನ್ನು ಬೆಳೆಸಬೇಕೆಂಬ ಉದ್ದೇಶದಿಂದ ಬ್ಲಾಗ್ ಪ್ರಪಂಚದಲ...
-
ಕನ್ನಡಸಾಹಿತ್ಯ.ಕಾಂ ಗೆ ಆಗ ತಾನೆ ಒಂದು ಜಯ ದೊರಕಿತ್ತು. ಮೈಕ್ರೋಸಾಫ್ಟ್ನ 'ತುಂಗಾ' ಫಾಂಟ್ ವಿಚಾರದಲ್ಲಿ ಕನ್ನಡಸಾಹಿತ್ಯ.ಕಾಮ್ ನೆಡೆಸಿದ ಹೋರಾಟ, ಚರ್ಚೆಗಳು, ...
-
ಬರಹ: ಕಿರಣ್ ಎಂ ನಿರ್ವಾಹಕರು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಬೆಂಗಳೂರು ಈ ಶಿಬಿರದ ಮಾಸ್ಟರ್ ಪ್ಲಾನ್ ಎರಡು ತಿಂಗಳು ಹಳೆಯದ್ದು. ಬೆಂಗಳೂರಿನ ಧಾವಂತದಲ್ಲಿ ನಮ್ಮನ್ನೆ...
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಟಿವಿ ವಾಹಿನಿಗಳ ಅಬ್ಬರ ಮತ್ತು ಸರ್ಕಾರಿ ರೇಡಿಯೊ ವಾಹಿನಿಗಳ ಏಕತಾನತೆಯ ಕಾರ್ಯಕ್ರಮಗಳನ್ನು ಕೇಳಿ ಬೇಸತ್ತು ರೇಡಿಯೊವನ್ನು ಮೂಲೆಗೆಸೆದಿದ್ದ ಜನರನ್ನು ಮತ್ತೆ ರೇಡಿಯೋದೆಡೆಗೆ...
-
ಕಂಪ್ಯೂಟಿಂಗ್ ವಾತಾವರಣದಲ್ಲಿ ಕನ್ನಡದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕನ್ನಡಸಾಹಿತ್ಯಡಾಟ್ಕಾಂ ಸರ್ಕಾರಕ್ಕೆ ಸಲ್ಲಿಸಲಿರುವ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ...
No comments:
Post a Comment