7.29.2006
ಅಪರೂಪದ ಜಾನಪದ ಗಾರುಡಿಗ ಎಸ್.ಕೆ.ಕರೀಂಖಾನ್ ರವರು ಇನ್ನಿಲ್ಲ...
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ.....
ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀವ ಜೈನ್ ಆಸ್ಪತ್ರೆಯ ಹಾಸಿಗೆ ಮೇಲೆ ಎಷ್ಟು ನರಳಿತೋ...? ಕನ್ನಡ ಮನೆ ಮಾತಲ್ಲದಿದ್ದರೂ, ಅವರು ಕನ್ನಡ ಜಾನಪದ ಕಲೆಯನ್ನು ಉಸಿರಾಗಿಸಿಕೊಂಡ ರೀತಿ ಅನನ್ಯ ಮತ್ತು ಅಪರೂಪ. ಕೊನೆಯ ದಿನಗಳಲ್ಲೂ ಸರ್ಕಾರಗಳು ಅವರಿಗೊಂದು ಸೂರು ಮಾಡಿಕೊಡಲಿಲ್ಲ. ಅವರನ್ನು ಸಂಬಂಧಿಕರ ಹಂಗಿನಲ್ಲೇ ಕೊನೆಯುಸಿರೆಳೆಯುವಂತೆ ಮಾಡಿಬಿಟ್ಟವು. ಹಿರಿಯ ಜೀವಕ್ಕೆ ನಮ್ಮೆಲ್ಲರ ಮನಸಾರ ನುಡಿ ನಮನಗಳಿರಲಿ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕನ್ನಡ ಭವನದಲ್ಲಿ ಮನೆಯಂಗಳದ ಮಾತುಕಥೆಗೆ ಬಂದಿದ್ದ ಕರೀಂ ಖಾನರು ನನಗಗೊಂದು ಸೈಟೋ ಏನಾದರೂ ಕೊಡಿಸಿ...ಎಂದು ಪ್ರೇಕ್ಷಕರ ಮುಂದೆ ಅಕ್ಷ್ರರಶಃ ಬೇಡಿಕೊಂಡಿದ್ದರು. ಕೊನೆಯ ದಿನಗಳಲ್ಲೂ ಕನ್ನಡಿಗರು ಅವರಿಗೆ ಸಲ್ಲಿಸಬೇಕಾದ ಗೌರವ ಸಲ್ಲಿಸಲಿಲ್ಲ..
ಭಗವದ್ಗೀತೆಯನ್ನೊಳಗೊಂಡು ಅನೇಕಾನೇಕ ಕಾವ್ಯಗಳ ಬಗ್ಗೆ ಪಾಂಡಿತ್ಯ ಗಳಿಸಿದ್ದ ಕರೀಂಖಾನರು...ಹಿಂದೂ ದೇವರುಗಳ ಮೇಲೆ ಭಕ್ತಿಗೀತೆಗಳನ್ನು
ರಚಿಸಿ....ಭಕ್ತರು ನಾಚುವಂತೆ ಮಾಡಿದರು....
ಮುಸ್ಲಿಮರಲ್ಲಿ ಮುಸ್ಲಿಮರಾಗದೆ...ಹಿಂದುಗಳಲ್ಲಿ ಹಿಂದೂವಾಗದೆ...ಮನೆಯನೆಂದೂ ಕಟ್ಟಿಕೊಳ್ಳದೆ...ವಿಶ್ವಮಾನವರಾಗಿ ಅನಂತ ಚೇತನವಾಗುಳಿದ
ಕರೀಂ ಖಾನರಿಗೆ ಕರೀಂಖಾನರೇ ಸಾಟಿ....
ಮತ್ತೊಮ್ಮೆ ಹುಟ್ಟಿ ಬನ್ನಿ...ಜಾನಪದ ಕೊನೆಯಾಗುವಷ್ಟರಲ್ಲಿ....!!!
*******************
ಜನಪ್ರಿಯ ಲೇಖನಗಳು
-
ಲೇಖಕರು: ಎಚ್.ಎಸ್. ಪ್ರಭಾಕರ, ಹಾಸನ ಲೇಖನ ಕೃಪೆ: ಸಂಯುಕ್ತ ಕರ್ನಾಟಕ ಈ ಜಗತ್ತಿನಲ್ಲಿ ನಾವು ನೀವು ಸೇರಿದಂತೆ ಜೀವಿಗಳು ಯಾವ ಕಾರಣಕ್ಕಾಗಿ ಜೀವಿಸಬೇಕು; ಜೀವಿಸುವ ಉದ್ದೇಶವ...
-
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಶೇಷಾದ್ರಿಪುರಂ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಚರಿಸುತ್ತಿರುವ ಕನ್ನಡಸಾಹಿತ್ಯ.ಕಾಂ ನ ಐದನೇ ವಾರ್ಷಿಕೋತ್ಸವ, ...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
(ಗೆಳೆಯ ಆಸ್ಟಿನ್ ಜೋಸ್ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲಿನವ. ವೃತ್ತಿಯಿಂದ ವಿಪ್ರೊ ಕಂಪನಿಯಲ್ಲಿ ತಂತ್ರಾಂಶ ತಜ್ಞ. ವಿಜಯನಗರ ಕಾಲದ ನಾಣ್ಯ ಸಂಗ್ರಹ...
-
ಸ್ನೇಹಿತರೆ, ‘Gold questnet ಪೋಸ್ಟ್ಮಾರ್ಟಂ:ಚಿನ್ನ ಮಾರಿ ಲಕ್ಷ ಗಳಿಸಿ’ ಲೇಖನ ಇಷ್ಟೊಂದು ಸಂಚಲನಕ್ಕೆ ಕಾರಣವಾಗುತ್ತೆ ಅನ್ನೋ ಯೋಚನೆ ನನಗಿರಲಿಲ್ಲ. ಇ-ಮೈಲ್ನಲ್ಲಿ, ಫ...
No comments:
Post a Comment