10.11.2006
A meeting with Prof.Sudhakar: Minutes by Arun,Mysore
ಭಾನುವಾರ ಅಕ್ಟೋಬರ್ ೧. ಆಯುಧ ಪೂಜೆ ದಿವಸ, ಮೈಸೂರಿಗೆ ದಸರ ಸಂಭ್ರಮ. ಮೈಸೂರೆಂಬ ರಾಜನಗರಿ ನವ ವಧುವಂತೆ ಅಲಂಕಾರಗೊಂಡು ಮೈಮರೆತಿತ್ತು. ಆ ಸಂದರ್ಭದಲ್ಲಿ ಬೆಂಗಳೂರಿನ ಹಬ್ಬ ಮರೆತು ಮೈಸೂರಿಗೆ ಬಂದವರು, ಅರೆಹಳ್ಳಿ ರವಿ ಮತ್ತು ಶ್ರಿನಿವಾಸ್.
ನನಗೆ ಫೋನ್ ಮಾಡಿ, ಮೈಸೂರಿಗೆ ಬಂದಿರುವ ವಿಷಯ ತಿಳಿಸಿದಾಗ ನನ್ನ ದಸರ ಉತ್ಸಾಹ ಇಮ್ಮಡಿಯಾದದ್ದು ಸುಳ್ಳಲ್ಲ . ಏಕೆಂದರೆ ಅವರಿಬ್ಬರೂ ಬಂದಿದ್ದು ಕನ್ನಡಸಾಹಿತ್ಯ.ಕಾಂ ನ ಪರವಾಗಿ. ಬಹಳ ಒತ್ತಾಯ ಮಾಡಿ ನಮ್ಮ ಮನೆಗೆ ಕರೆದುಕೊಂಡುಹೋಗಿ, ಅಲ್ಲಿ ಎಲ್ಲರೂ ಮಧ್ಯಾಹ್ನದ ಊಟ ಮುಗಿಸಿ, ಸುಧಾಕರ್ ರವರ ಮನೆ ತಲುಪಿದಾಗ ಸಮಯ ಮೂರೂವರೆ.
ಸುಧಾಕರ್ ಯಾರು ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿರಬಹುದು.
ಸುಧಾಕರ್ ಅವರು ಮೈಸೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಭಾಗದಲ್ಲಿ ಸಿಸ್ಟಮ್ಸ್ ಇ೦ಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ ಕಂಪ್ಯೂಟಿಂಗ್ ವಲಯದಲ್ಲಿ ಅಪಾರ ಅನುಭವಿಗಳು. ಮೇಲಾಗಿ ಕನ್ನಡದ ಬಗ್ಗೆ ವಿಶೇಷ ಪ್ರೀತಿ. ಕಂಪ್ಯೂಟಿಂಗ್ ವಾತಾವರ
ಣದಲ್ಲಿ ಕನ್ನಡದ ಸಾರ್ವಭೌಮತ್ವ ಇರಲೇಬೇಕು ಎಂದು ಪ್ರತಿಪಾದಿಸಿದವರು. ಸದ್ಯಕ್ಕೆ ಲಿನಕ್ಸ್ ಕನ್ನಡ ಅವತರಣಿಕೆ ಮತ್ತು ಅದರ ವಿವಿಧ ಸಾಧ್ಯತೆಗಳ ಬಗ್ಗೆ ತೊಡಗಿಸಿಕೊಂಡಿದ್ದಾರೆ. ಬಿಡುವಿಲ್ಲದ ಉಪನ್ಯಾಸಗಳನ್ನೂ ಈ ವಿಷಯದಲ್ಲಿ ನೀಡುತ್ತಿದ್ದಾರೆ.
ಪರಸ್ಪರ ಕುಶಲೋಪರಿಯಾದ ನಂತರ ಕನ್ನಡ ಸಾಹಿತ್ಯ.ಕಾ೦ ನ ಇತ್ತೀಚಿನ ಚಟುವಟಿಕೆಗಳ ಬಗ್ಗೆ ರವಿ , ಸ್ತೂಲವಾಗಿ ಸುಧಾಕರರವರಿಗೆ ಹೇಳಿದರು.
ಸುಧಾಕರರವರಿಗೆ ಕನ್ನಡಸಾಹಿತ್ಯ.ಕಾಂ ಬಗ್ಗೆ ಈಗಾಗಲೇ ತಿಳಿದಿರುವ ಕಾರಣ ನೇರ ವಿಷಯಕ್ಕೆ ಬಂದೆವು.
ಮೈಸೂರಿನಲ್ಲಿ ಶುರುವಾಗಿರುವ ನಮ್ಮ ಕನ್ನಡ ಸಾಹಿತ್ಯ.ಕಾ೦ನ ಬೆ೦ಬಲಿಗರ ಬಳಗದ ಬಗ್ಗೆ ಅವರಿಗೆ ಮಾಹಿತಿ ನೀಡಿದೆವು.
ಮೈಸೂರಿನಂತಹ ಸಾಂಸ್ಕೃತಿಕ ನಗರಿ, ಐ.ಟಿ.ನಗರಿಯಾಗುವ ಲPಣಗಳನ್ನು ತೋರಿಸುತ್ತಿರುವ ಈ ದಿನಗಳಲ್ಲಿ ನಾವು ಸಾಂಸ್ಕೃತಿಕತೆ-ಭಾಷೆ-ಮಾಹಿತಿ ತಂತ್ರಜ್ಞಾನಗಳನ್ನು ಒಚಿದರೊಡನೊಂದು ಬೆಸೆಯುವ ಕಾರ್ಯವನ್ನು ಈಗಿನಿಂದಲೇ ಆರಂಭಿಸಬೇಕಾದ ಅಗತ್ಯವಿದೆ. ಮೈಸೂರಿನ ಬಳಗಕ್ಕೆ ಸಮಾನಾಸಕ್ತ ಚಿಂತಕರು, ಸಾಹಿತಿಗಳು, ಯುವ ಐ.ಟಿ ಎಂಜಿನೀಯರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸುಧಾಕರ್ರವರ ಸಹಕಾರ ಕೋರಿದೆವು. ಅವರು ಸಂತೋಷದಿಂದ ಒಪ್ಪಿಕೊಂಡು ತಾವೂ ಮೈಸೂರು ಕೆ.ಎಸ್.ಸಿ.ಬಳಗದ ಸದಸ್ಯರಾಗುವ ಇಚ್ಛೆ ವ್ಯಕ್ತಪಡಿಸಿದರು.
ಮೈಸೂರಿನ ಕವಿಗಳು, ಸಾಹಿತಿಗಳಿಗೆ, ತಂತ್ರಜ್ಞರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳುವಳಿಕೆ ಮೂಡಿಸಲು ಶಕ್ತಿ ಮೀರಿ ಪ್ರಯತ್ನ ಪಡುವುದಾಗಿ ಭರವಸೆ ಕೊಟ್ಟರು.
ಈ ನಿಟ್ಟಿನಲ್ಲಿ ಬರುವ ಡಿಸೆ೦ಬರ್ನಲ್ಲಿ ಮೈಸೂರಿನಲ್ಲಿ, ಬೆ೦ಗಳೂರು ಹಾಗು ಮು೦ಬೈ ಮಾದರಿಯ ಸಮಾವೇಶದ ಆಲೋಚನೆ ಮು೦ದಿಟ್ಟಾಗ, ಸುಧಾಕರ್ರವರು ಸ೦ಪೂರ್ಣ ಬೆ೦ಬಲ ಸೂಚಿಸಿದರು.
ಬಹು ಮುಖ್ಯವಾಗಿ ಭಾರತದ ಸಂದರ್ಭದಲ್ಲಿ ಸಂಸ್ಕೃತಿ ಮತ್ತು ಮಾಹಿತಿ ತಂತ್ರಜ್ಞಾನ ಕುರಿತಾದ ರಾಷ್ಟ್ರೀಯ ವಿಚಾರ ಸಂಕಿರಣದ ಬಗ್ಗೆ ಅವರೊಡನೆ ಬಹು ದೀರ್ಘವಾಗಿ ಚರ್ಚಿಸಿದೆವು. ಎರಡು ದಿನದ ಕಾರ್ಯಕ್ರಮದ ರೂಪುರೇಷೆ, ಸ್ಮರಣ ಸ೦ಚಿಕೆ, ಜಾಹೀರಾತು ಸಂಗ್ರಹ ಇತ್ಯಾದಿಗಳ ಬಗ್ಗೆ ಮಾತುಕತೆ ನಡೆಯಿತು. ನಮ್ಮಆಭಿಪ್ರಾಯಗಳಿಗೆ ಸ್ಪ೦ದಿಸಿ, ಸುಧಾಕರ್ರವರು ತಮ್ಮ ಸಲಹೆಗಳನ್ನು ಇತ್ತರು.
ನವೆ೦ಬರ್ನಲ್ಲಿ ಕರ್ನಾಟಕ ಸರ್ಕಾರ ಹಾಗು ಐ.ಟಿ ಸ೦ಸ್ಥೆಗಳ ಕನ್ನಡದ ತ೦ತ್ರಾ೦ಶ ಬೆಳವಣಿಗೆ ಕುರಿತಾದ ಅವಗಣನೆಯ ಬಗ್ಗೆ ಗಮನ ಸೆಳೆಯಲು, ಕನ್ನಡ ಸಾಹಿತ್ಯ.ಕಾ೦ ಹಾಗು ಬೆ೦ಬಲಿಗರ ಬಳಗ ಆಯೋಜಿಸುತ್ತಿರುವ ಒಚಿದು ದಿನದ ಉಪವಾಸ ಧರಣಿ ಮತ್ತು ಸಾತ್ವಿಕ ಪ್ರತಿಭಟನೆಗೆ, ತಾವು ಹಾಗು ಅವರ ಮಿತ್ರ ಬಳಗದ ಎಲ್ಲರು ಖುದ್ದು ಬಂದು ಬೆಂಬಲ ಸೂಚಿಸುವುದಾಗಿ ತಿಳಿಸಿದರು.
ಸುಮಾರು ೨ ಘ೦ಟೆಯ ಮಾತುಕತೆಯ ನ೦ತರ ಅಲ್ಲಿ೦ದ ಹೊರಟಾಗ ನಮ್ಮಲ್ಲಿ ಹೊಸ ಹುಮ್ಮಸ್ಸು ಕಾಣಿಸಿದ್ದು ಸ್ಪಷ್ಟವಾಗಿತ್ತು.
ಕನ್ನಡ ಮತ್ತು ತಾಂತ್ರಿಕತೆ ಬೆಸೆಯುವ ದಿಕ್ಕಿನಲ್ಲಿ ನಾವಿಟ್ಟಿರುವ ಪುಟ್ಟ ಹೆಜ್ಜೆಗೆ, ಹಿರಿಯರ ಬೆ೦ಬಲ ಅತ್ಯಗತ್ಯ.
ನಮ್ಮಲ್ಲಿ ಛಲ ಆಸೆಗಳೆರಡೆ ಸಾಲದು, ಕಾರ್ಯಕ್ಷಮತೆಯೂ ಬೇಕು.
ಸರಿಯಾದ ಸುಧಾಕರರವರಂಥಹ ಹಿರಿಯರಿಂದ ಉತ್ತಮ ಮಾರ್ಗದರ್ಶನವನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕಿದೆ.
ಕನ್ನಡಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು
ಕನ್ನಡ ಸಾಹಿತ್ಯ.ಕಾ೦ ಬೆ೦ಬಲಿಗರ ಬಳಗಕ್ಕಾಗಿ,
ಅರುಣ್ (ಅಚರಾ)
ಜನಪ್ರಿಯ ಲೇಖನಗಳು
-
ಬರಹ: ಕಿರಣ್ ಎಂ ನಿರ್ವಾಹಕರು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಬೆಂಗಳೂರು ಈ ಶಿಬಿರದ ಮಾಸ್ಟರ್ ಪ್ಲಾನ್ ಎರಡು ತಿಂಗಳು ಹಳೆಯದ್ದು. ಬೆಂಗಳೂರಿನ ಧಾವಂತದಲ್ಲಿ ನಮ್ಮನ್ನೆ...
-
ಕನ್ನಡಸಾಹಿತ್ಯ.ಕಾಂ ಸಾಮೂಹಿಕ ಚಟುವಟಿಕೆಯಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ನೆಡೆದ ಸಂಪೂರ್ಣ ಮತ್ತು ಪದಪರೀಕ್ಷಕ ಬಿಡುಗಡೆ ಸಮಾರಂಭ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದಲ್...
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
ಕೆಲವೊಮ್ಮೆ ಹಾಗಾಗುತ್ತೆ. ಎದುರಾಗುವ ಪ್ರತಿ ಸನ್ನಿವೇಷವೂ ನಮಗೆ ವಿರುದ್ಧವಾಗಿ ವರ್ತಿಸುತ್ತಿರುತ್ತದೆ. ಕನ್ನಡ ಅಂತರ್ಜಾಲ ಜಗತ್ತಿನಲ್ಲಿ ಕನ್ನಡದ ಪ್ರಾತಿನಿಧ್ಯತೆಯನ್ನು ಐದ...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
ಪುಸ್ತಕಗಳು ನಿಮ್ಮ ಮನೆಯಂಗಳಕ್ಕೆ...ಮನದಂಗಳಕ್ಕೆ. ಅತ್ತು ಹಗುರಾಗಲು ಹೆಗಲಿನಾಸರೆಯಿಲ್ಲ ನಕ್ಕು ಸಂಭ್ರಮಿಸಲು ಸಾವಿನನುಮತಿಯಿಲ್ಲ ಎಂದು ಬರೆಯುವ ವಿಕ್ರಮ ಹತ್ವಾರ್ ಮೊದಲ ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
(ಸ್ನೇಹಿತರೆ ಬೆಂಗಳೂರು ಮಾತನಾಡುವವರಿಗೆ ಮುಕ್ತ ಅವಕಾಶ ನೀಡಿದೆ. ಇಲ್ಲಿ ಕನ್ನಡಿಗರನ್ನು ಬಯ್ಯಬಹುದು. ಅನ್ಯಭಾಷಿಗರನ್ನು ಅವರ ಭಾಷೆಯಲ್ಲಿಯೇ ಓಲೈಸಬಹುದು. ಬೀದಿ ನಾಯಿಗಳ ಪರ...
No comments:
Post a Comment