3.08.2008
`ವಿಷಾದ ಕಾಲ' : ಒಂದು ಕವನ
ನಡು ಮಧ್ಯಾಹ್ನದಲ್ಲೂ ಆವರಿಸುವ ದಟ್ಟ ಮಂಜು.
ಅದು ಮಂಜೋ, ಪ್ಲಾಸ್ಟಿಕ್ಕಿನ ಹೊಗೆಯೋ,
ಹೊತ್ತಗೆ ಸುಟ್ಟುಹೋದ
ಕಮಟು ಪರಿಮಳವೋ ಅರಿಯದೆ
ಮನ, ಮಲಿನ ಖೋಡಿ .
ಕಸದ ಹೊಳೆಯಲಿ ಹಾಯಿದೋಣಿ ವಿಹಾರ
ಸಂದುಗಳ ಬಂಧನದಲಿ ಸಣ್ಣ ಕುಸುಕು
ಮಬ್ಬಿನಲಿ ನಿಡಿ ನೋಟಕ್ಕೂ ಸಿಗದ ಕಪ್ಪು ಸೂರ್ಯ.
ಚೆಂಗನೆ ನೆಗೆವ ಜಿಂಕೆಯ ಕೊಂದು
ಕಮ್ಮನೆ ಮಾಂಸ ಹುರಿಯಲೋಸುಗ
ಹೊಗೆಮಂಜಿನ ಅಡಿ ಕರಕಲಾಯಿತು
ಬೂದಿ ಬಾನಾಯಿತು-ಬಯಸಿ
ಹಿಟ್ಟು ನಾದಿ ನಾದಿ ನೀರಾಗಿ
ಕರಗಿ ಕರಗಿ ಬೆಣ್ಣೆನುಣುಪು
ರಾಡಿ-ಜೇಡಿ ಪದರ ತೋಡಿ
ಉಸುಕು ನಿಚ್ಛಳ
ಭಾವಜಲದೊಡಗೂಡಿ.
ನಿಶ್ಛಲ ನಿರ್ವಾತ ನಿರಂತರ
Subscribe to:
Post Comments (Atom)
ಜನಪ್ರಿಯ ಲೇಖನಗಳು
-
ಸ್ನೇಹಿತರೆ, ಆವತ್ತು ಭಾನುವಾರ ಬಸವನಗುಡಿಯ ಎನ್.ಆರ್.ಕಾಲೋನಿಯಲ್ಲಿ ಬಸ್ಸಿಳಿದಾಗ ಬೇಸಿಗೆಯ ಧಗೆ ಮುಖಕ್ಕೆ ರಾಚುತ್ತಿತ್ತು. ಮೈಯ ಶಕ್ತಿಯೆಲ್ಲಾ ಬೆವರಾಗಿ ಹರಿದು ಕರ್ಚೀಪು ಒ...
-
ಮಾನ್ಯ ಮುಖ್ಯ ಮಂತ್ರಿಗಳು ಹಾಗು ಮಾಹಿತಿ ತಂತ್ರಜ್ಞಾನ ಸಚಿವರು, ಕರ್ನಾಟಕ ಸರ್ಕಾರ ಮಾನ್ಯ ಪ್ರಾಥಮಿಕ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಮಾನ್ಯ ಪ್ರೌಢ ಶಿಕ್ಷಣ ಸಚಿವರು ಕರ...
-
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿ...
-
ಗೆಳೆಯರೆ, "ಮಾಹಿತಿ ತಂತ್ರಜ್ಞಾನದ ಸಂದರ್ಭದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
(ಸ್ನೇಹಿತರೆ ಬೆಂಗಳೂರು ಮಾತನಾಡುವವರಿಗೆ ಮುಕ್ತ ಅವಕಾಶ ನೀಡಿದೆ. ಇಲ್ಲಿ ಕನ್ನಡಿಗರನ್ನು ಬಯ್ಯಬಹುದು. ಅನ್ಯಭಾಷಿಗರನ್ನು ಅವರ ಭಾಷೆಯಲ್ಲಿಯೇ ಓಲೈಸಬಹುದು. ಬೀದಿ ನಾಯಿಗಳ ಪರ...
-
ಲೇಖಕರು: ಎಚ್.ಎಸ್. ಪ್ರಭಾಕರ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ನಿಧನರಾದ ಪ್ರಯುಕ್ತ ಸರ್ಕಾರ ಜ.೨೮ ರಿಂದ ಫೆ.೩ ರವರೆಗೆ ಒಂದು ವಾರ ಶೋಕಾಚರಣೆ ಪ್ರಕಟಿಸಿದ್ದು ಸರಿ...
-
ಸ್ನೇಹಿತರೆ, ‘Gold questnet ಪೋಸ್ಟ್ಮಾರ್ಟಂ:ಚಿನ್ನ ಮಾರಿ ಲಕ್ಷ ಗಳಿಸಿ’ ಲೇಖನ ಇಷ್ಟೊಂದು ಸಂಚಲನಕ್ಕೆ ಕಾರಣವಾಗುತ್ತೆ ಅನ್ನೋ ಯೋಚನೆ ನನಗಿರಲಿಲ್ಲ. ಇ-ಮೈಲ್ನಲ್ಲಿ, ಫ...
1 comment:
ರವಿಯವರೇ,
ಈ ಕವನಕ್ಕೊಂದು ಚಿತ್ರ ಬರೆಯಬೇಕೆಂಬ ಆಸೆ ಆಯ್ತು..ಹಾಡು ಅರ್ಥ ಮಾಡ್ಕೊಳ್ತಾ ಇದಿನಿ..ಕೊನೆಯ ಪ್ಯಾರಾದ ಪದಗಳು ಕ್ಲಿಷ್ಟ ಅನ್ನಿಸ್ತಿದೆ ನಂಗೆ...ಮೊದಲ ಪ್ಯಾರಾದ ಪದಗಳ ಬಳಕೆ, ಜೋಡಣೆ ಅಧ್ಬುತ...ಇನ್ನೂಳಿದ ಪ್ಯಾರನ ಅರ್ಥ ಮಾಡ್ಕೊಳ್ತಾ ಇದಿನಿ :)...ನೀವು ಸುಲಭವಾಗಿಸ್ತಿರಿ ಅನ್ನೊ ನಂಬಿಕೆ ನನ್ಗಿದೆ...
Post a Comment